ಹಾಲಿನ ಟ್ಯಾಂಕರ್ನಲ್ಲಿ ಮದ್ಯ ಸಾಗಾಟ: ಇಬ್ಬರ ಬಂಧನ
Shivanand
April 12, 2020
featured, General News
580 Views
ಖಾನಾಪುರ: ಗೋವಾ ರಾಜ್ಯದಲ್ಲಿ ತಯಾರಿಸುವ ಭಟ್ಟಿ ಮದ್ಯವನ್ನು ಹಾಲಿನ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಖಾನಾಪುರ ಪೊಲೀಸರು ಇಬ್ಬರನ್ನು ಬಂಧಿಸಿ ಟ್ಯಾಂಕರ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಹಾಲು ಸರಬರಾಜು ಮಾಡಲು ಬೆಳಗಾವಿಯಿಂದ ಗೋವಾ ರಾಜ್ಯಕ್ಕೆ ತೆರಳಿದ್ದ ಬೆಳಗಾವಿಯ ಟ್ಯಾಂಕರ್ ಗೋವಾದಿಂದ ಬೆಳಗಾವಿಯತ್ತ ಬರುವಾಗ ಗೋವಾದ ಭಟ್ಟಿ ಮದ್ಯವನ್ನು ಮತ್ತು 8 ಬಾಕ್ಸ್ ಗೋವಾ ಮದ್ಯವನ್ನು ಹೊತ್ತು ತರುತ್ತಿದ್ದುದನ್ನು ಅರಿತ ಪೊಲೀಸರು ತಾಲ್ಲೂಕಿನ ಕಣಕುಂಬಿ ಬಳಿಯ ಚೆಕ್ ಪೋಸ್ಟ್ ಬಳಿ ಕೈಗೊಂಡ ವಿಶೇಷ ಕಾರ್ಯಾಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ನಿಷೇಧಿತ ಮದ್ಯ ಸಾಗಿಸುತ್ತಿದ್ದ ಆರೋಪದಡಿ ಬೆಳಗಾವಿ ತಾಲ್ಲೂಕು ರಾಕಸಕೊಪ್ಪ ನಿವಾಸಿಗಳಾದ ಟ್ಯಾಂಕರ್ ಚಾಲಕ ರತನ ಪಾಟೀಲ, ಕ್ಲೀನರ್ ಅಮೋಲ ಪವಾರ ಅವರನ್ನು ವಶಕ್ಕೆ ಪಡೆದು ಬಂಧಿತರಿಂದ ಮದ್ಯ ಸಾಗಾಟಕ್ಕೆ ಬಳಸಿದ ಗೂಡ್ಸ್ ವಾಹನ ಮತ್ತು ಅದರಲ್ಲಿದ್ದ 13,500 ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಎಸ್.ಪಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಖಾನಾಪುರ ಠಾಣೆಯ ಪಿ.ಎಸ್.ಐ ಬಸಗೌಡ ಪಾಟೀಲ, ಸಿಬ್ಬಂದಿ ಕೆ.ಬಿ ಮೊಕಾಶಿ ಹಾಗೂ ಇತರರು ಭಾಗವಹಿಸಿದ್ದರು. ಈ ಕುರಿತು ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾನಾಪುರ ತಾಲ್ಲೂಕಿನ ಎರಡು ಕಡೆಗಳಲ್ಲಿ ಖಾನಾಪುರ ಪೊಲೀಸರು ನಡೆಸಿದ ಮಿಂಚಿನ ದಾಳಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಮದ್ಯ ತಯಾರಿಸಿ ಮಾರುತ್ತಿದ್ದ ಮೂವರನ್ನು ಬಂಧಿಸಿ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ತಾಲ್ಲೂಕಿನ ಬೈಲೂರು ಮತ್ತು ಮಾಡಿಗುಂಜಿ ಗ್ರಾಮಗಳಲ್ಲಿ ದಾಳಿ ನಡೆದಿದ್ದು, ಕಳ್ಳಭಟ್ಟಿ ತಯಾರಿಕೆ ಮತ್ತು ಮಾರಾಟದ ಆರೋಪದಡಿ ಬೈಲೂರು ಗ್ರಾಮದ ಲಕ್ಷ್ಮಣ ಗೋವೇಕರ ಮತ್ತು ಗುಂಜಿ ಗ್ರಾಮದ ಗಸ್ತಿಮಾ ರಾಡ್ ಗ್ರಿಜ್ ಮತ್ತು ಶಿರಿಲ್ ರಾಡ್ ಗ್ರಿಜ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 40 ಸಾವಿರ ಬೆಲೆಬಾಳುವ ಎರಡು ಬೈಕ್, 30 ಲೀ
ಕಳ್ಳಭಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಖಾನಾಪುರ ಪೊಲೀಸರು ತಿಳಿಸಿದ್ದಾರೆ.
Check Also
ಇಳಕಲ್/ಚನ್ನಮ್ಮನ ಕಿತ್ತೂರು : ‘ಜನರಲ್ಲಿ ದುಶ್ಚಟಗಳನ್ನು ಬಿಡಿಸಲು ಮೌನಕ್ರಾಂತಿ ಕೈಗೊಂಡಿರುವ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ್ವರ …
ನೇಗಿನಹಾಳ: ಪ್ರಪಂಚದ ಇತಿಹಾಸದ ಪುಟಗಳಲ್ಲಿ ನೋಡಿದಾಗ ಕೆಟ್ಟ ಮಕ್ಕಳು ಜನಿಸಿರಬಹುದು ಆದರೆ ಕೆಟ್ಟ ತಂದೆ-ತಾಯಿಗಳು ಜನಿಸಲು ಸಾಧ್ಯವಿಲ್ಲ ಮಕ್ಕಳಾದವರು …
ಬೆಳಗಾವಿ: ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಬೆಂಬಲಿಸಿ ತಪ್ಪು ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕ್ಷಮೆ ಕೇಳಿ …
ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ …
ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …
ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …
ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …
ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …
ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …
~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …
ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …
ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …
ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …
ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …