ಸಿಂದಗಿಯ ಚನ್ನಮ್ಮ ವೃತ್ತ ಮರುಸ್ಥಾಪನೆಗೆ ಮುಖ್ಯಮಂತ್ರಿಗಳಿಗೆ ಮನವಿ
Shivanand
June 5, 2020
featured, General News, ಬೆಳಗಾವಿ
507 Views
ಬೆಳಗಾವಿ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚನ್ನಮ್ಮಾಜಿ ವೃತ್ತವನ್ನು ತೆರೆವುಗೊಳಿಸಿರುವುದನ್ನು ಶೀಘ್ರವಾಗಿ ಸರಿಪಡಿಸಿ ಮರುನಿರ್ಮಾಣ ಮಾಡಬೇಕೆಂದು ಜಿ.ಪಂ ಸದಸ್ಯೆ ರೋಹಿಣಿ ಪಾಟೀಲ ಹೇಳಿದರು.
ಮೇ, 30 ರಂದು ರಾತ್ರಿ ಸಮಯದಲ್ಲಿ ಸಿಂದಗಿ ತಾಲೂಕಾಡಳಿತವು ಯಾವುದೇ ಮುನ್ಸೂಚನೆ ನೀಡದೆ, ಭಾರತದ ಇತಿಹಾಸದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಪ್ರಥಮ ಬಾರಿಗೆ 1824 ರಲ್ಲಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಹೋರಾಡಿ ಬ್ರಿಟಿಷ್ ಜಿಲ್ಲಾ ಕಲೆಕ್ಟರ್ ಅಧಿಕಾರಿಯನ್ನು ಕೊಂದು ಹಾಕಿ ತಮ್ಮ ಶೌರ್ಯ ಸಾಹಸಗಳನ್ನು ತೋರಿ ಜಗತ್ತಿಗೆ ಮಾದರಿ ಮಹಿಳೆಯಾಗಿ ಹೋಗಿದ್ದಾರೆ. ಅಂತಹ ವೀರರಾಣಿ ಕಿತ್ತೂರು ಚೆನ್ನಮ್ಮಾಜಿ ವೃತ್ತವನ್ನು ಏಕಾಏಕಿ ದ್ವಂಸ ಮಾಡಿ ತೆರೆವುಗೊಳಿಸಿರುವುದು ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಗೆ ಮಾಡಿದ ಅವಮಾನವಾಗಿದೆ.
2007 ರಲ್ಲಿ ಈ ವೃತ್ತವನ್ನು ಸಿಂದಗಿ ಪುರಸಭೆಯವರು ಠರಾವು ಮಾಡಿ ಆದೇಶ ನೀಡಿದ್ದರು. ಆದೇಶದ ಅನುಸಾರ 2019ರಲ್ಲಿ ವೃತ್ತವನ್ನು ನಿರ್ಮಿಸಿ ಸ್ಥಳೀಯ ಶಾಸಕರ ಅನುದಾನ ಹಾಗೂ ಸಮಾಜದವರಿಗೆ ಹಣ ಸಂಗ್ರಹಿಸಿ ಸುಮಾರು 1 ಕೋಟಿ ರೂಪಾಯಿಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಸದರಿ ವೃತ್ತದ ಕಾಮಗಾರಿಯನ್ನು ಆರಂಭಿಸಿದ್ದು ಈಗ 8 ತಿಂಗಳು ಆಗಿದೆ. ಇಲ್ಲಿಯವರೆಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಧ್ವಂಸ ಮಾಡಿರುವುದು ಸಮಾಜಕ್ಕೆ ತುಂಬಾ ನೋವುಂಟಾಗಿದೆ. ಈ ಘಟನೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಕಾಣದ ಕೈಗಳನ್ನು ಪತ್ತೆ ಹಚ್ಚಿ ಅವರಿಗೆ ಕಾನೂನಿನ ಮೂಲಕ ಉಗ್ರವಾದ ಶಿಕ್ಷೆ ನೀಡಬೇಕೆಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶರಣ: ಬಿ ಎಸ್ ಯಡಿಯೂರಪ್ಪ ನವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಲಿಂಗಾಯತ ಸೇವಾ ಸಮಿತಿ ಪದಾಧಿಕಾರಿಗಳಾದ ವಕೀಲರಾದ ಬಸವರಾಜ ರೊಟ್ಟಿ, ಬೆಳಗಾವಿ ಜಿಲ್ಲಾ ಪಂಚಾಯತ ಸದಸ್ಯೆ ರೋಹಿಣಿ ಪಾಟೀಲ, ತಾಲೂಕ ಪಂಚಾಯತ ಸದಸ್ಯ ಮುದಕಪ್ಪ ಮರಡಿ, ಆರ್ ಎಸ್ ದರ್ಗೆ, ರಾಜು ಮಗದುಮ್ಮ, ಎಫ್ ಎಸ್ ಸಿದ್ಧನಗೌಡರ, ವಿ.ಕೆ ಪಾಟೀಲ, ಶಿವಾನಂದ ಮೆಟ್ಯಾಲ, ರಾಜು ಕುಂದಗೋಳ, ಪ್ರಭು ಬೆಣ್ಣಿ, ರಾಜೇಶ್ವರಿ ದೇಯನ್ನವರ, ಎಮ್.ಸಿ ಪಾಟೀಲ, ಮಹಾಂತೇಶ ದೀವಟಗಿ, ಅಂಜುಮ್ ಶೇಖ್, ಅನುಪ್ರೀಯಾ ನಾಯಕ ಮತ್ತಿತ್ತರರು ಉಪಸ್ಥಿತರಿದ್ದರು.
Check Also
ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …
ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …
ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …
ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …
ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …
~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …
ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …
ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …
ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …
ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …
ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …
ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …
ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …
ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …